Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:5 - ಕನ್ನಡ ಸತ್ಯವೇದವು C.L. Bible (BSI)

5 ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:5
16 ತಿಳಿವುಗಳ ಹೋಲಿಕೆ  

ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


“ಒಡಂಬಡಿಕೆಯ ಈ ವಚನಗಳನ್ನು ಕೇಳಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಸಾರು.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಯಕೋಬ ಮನೆತನಕ್ಕೆ ಇದನ್ನು ಸಾರಿರಿ, ಜುದೇಯದಲ್ಲಿ ಹೀಗೆ ಪ್ರಕಟಿಸಿರಿ :


ಅವೆರಡನ್ನೂ ನೀನು ಊದಿಸುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.


ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


“ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು