Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:12 - ಕನ್ನಡ ಸತ್ಯವೇದವು C.L. Bible (BSI)

12 ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:12
8 ತಿಳಿವುಗಳ ಹೋಲಿಕೆ  

ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,


ಹುಲ್ಲು ಕೊಯ್ದು ತಂದಮೇಲೆ, ಗುಡ್ಡದ ಸೊಪ್ಪು ಕೂಡಿಸಿಟ್ಟ ಮೇಲೆ, ಹಸಿ ಹುಲ್ಲು ಚಿಗುರುತ್ತದೆ.


ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.


ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.


ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು