Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:8
9 ತಿಳಿವುಗಳ ಹೋಲಿಕೆ  

ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು