Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:22 - ಕನ್ನಡ ಸತ್ಯವೇದವು C.L. Bible (BSI)

22 ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:22
10 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು