Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:3 - ಕನ್ನಡ ಸತ್ಯವೇದವು C.L. Bible (BSI)

3 ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಸ್ದೀಯರು ನಮ್ಮನ್ನು ಕೊಲ್ಲುವದಕ್ಕೋ ಬಾಬೆಲಿಗೆ ಸೆರೆ ಒಯ್ಯುವದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:3
12 ತಿಳಿವುಗಳ ಹೋಲಿಕೆ  

ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.


ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು