5 ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,
5 ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
5 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,
5 ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.
ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!
ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.
ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.