Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:7 - ಕನ್ನಡ ಸತ್ಯವೇದವು C.L. Bible (BSI)

7 ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:7
11 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.


ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!


ಆಗ ಚಿಕ್ಕವರು, ದೊಡ್ಡವರು, ಸೇನಾಪತಿಗಳು, ಎಲ್ಲರು ಬಾಬಿಲೋನಿಯಾದವರಿಗೆ ಹೆದರಿ ಈಜಿಪ್ಟಿಗೆ ಓಡಿಹೋದರು.


ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು