ಯೆರೆಮೀಯ 43:7 - ಕನ್ನಡ ಸತ್ಯವೇದವು C.L. Bible (BSI)7 ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!