Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:12 - ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:12
18 ತಿಳಿವುಗಳ ಹೋಲಿಕೆ  

ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು