Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:13 - ಕನ್ನಡ ಸತ್ಯವೇದವು C.L. Bible (BSI)

13 ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:13
11 ತಿಳಿವುಗಳ ಹೋಲಿಕೆ  

ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.


ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.


ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು