Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:15
14 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.


ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.


ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!


ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು