Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:26 - ಕನ್ನಡ ಸತ್ಯವೇದವು C.L. Bible (BSI)

26 ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:26
28 ತಿಳಿವುಗಳ ಹೋಲಿಕೆ  

ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.


ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’


ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.


“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.


ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು