Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:28 - ಕನ್ನಡ ಸತ್ಯವೇದವು C.L. Bible (BSI)

28 ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:28
20 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”


ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು