Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 45:1 - ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 45:1
18 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.


ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ:


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;


ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.


“ಬಾರೂಕನೇ, ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿ ನಿನಗೆ ಹೇಳುವುದನ್ನು ಕೇಳು: ನೀನು, ‘ಅಯ್ಯೋ, ನನಗೆ ಕೇಡು!


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.


ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು