Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 45:3 - ಕನ್ನಡ ಸತ್ಯವೇದವು C.L. Bible (BSI)

3 ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘“ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 45:3
28 ತಿಳಿವುಗಳ ಹೋಲಿಕೆ  

ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


“ಬಾರೂಕನೇ, ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿ ನಿನಗೆ ಹೇಳುವುದನ್ನು ಕೇಳು: ನೀನು, ‘ಅಯ್ಯೋ, ನನಗೆ ಕೇಡು!


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು