Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:19 - ಕನ್ನಡ ಸತ್ಯವೇದವು C.L. Bible (BSI)

19 ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:19
14 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’


ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.


ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.


ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು