Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:22 - ಕನ್ನಡ ಸತ್ಯವೇದವು C.L. Bible (BSI)

22 ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವದು; [ಶತ್ರುಗಳು] ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅದರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:22
13 ತಿಳಿವುಗಳ ಹೋಲಿಕೆ  

ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.


ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.


ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ಕಾಡಿನಲೋ ಎಂಬಂತೆ ಕೊಡಲಿಯನೆತ್ತಿ ಹಿಡಿದು I ದೇಗುಲದಲಿ ಕೈಗೊಡಲಿ, ಚಮಟಿಗಳ ಪಿಡಿದು I ನಾಶಮಾಡುತಿಹರು ನೋಡು ಕೆತ್ತನೆಗಳ ಕಡಿದು II


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು