Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:26 - ಕನ್ನಡ ಸತ್ಯವೇದವು C.L. Bible (BSI)

26 ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:26
7 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು.


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು