Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:6 - ಕನ್ನಡ ಸತ್ಯವೇದವು C.L. Bible (BSI)

6 “ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು; ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:6
22 ತಿಳಿವುಗಳ ಹೋಲಿಕೆ  

ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.


ನಿನ್ನ ಲಜ್ಜೆಯ ಸುದ್ದಿ ರಾಷ್ಟ್ರಗಳಿಗೆ ಮುಟ್ಟಿದೆ ಲೋಕವೆಲ್ಲಾ ನಿನ್ನ ಗೋಳಾಟದಿಂದ ತುಂಬಿದೆ ಯೋಧನು ಯೋಧನನ್ನು ಎಡವಿ, ಇಬ್ಬರೂ ಬಿದ್ದಿರುವರು ಕೆಳಗೆ.”


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.


ಅದಕ್ಕೆ ಸ್ವಾಮಿ ನನಗೆ ಹೀಗೆಂದರು : “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.


ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು