Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:14 - ಕನ್ನಡ ಸತ್ಯವೇದವು C.L. Bible (BSI)

14 ‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “‘ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧವೀರರಾಗಿದ್ದೇವೆ’ ಎಂದು ನೀವು ಹೇಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನಾವು ಪರಾಕ್ರಮಶಾಲಿಗಳೂ, ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:14
12 ತಿಳಿವುಗಳ ಹೋಲಿಕೆ  

ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ - “ಈಜಿಪ್ಟಿಗೆ ಆಧಾರವಾದವರು ಬೀಳುವರು, ಅದರ ಶಕ್ತಿ ಮದವು ಇಳಿದುಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು. ಇದು ಸರ್ವೇಶ್ವರನಾದ ದೇವರ ನುಡಿ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು