Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:2 - ಕನ್ನಡ ಸತ್ಯವೇದವು C.L. Bible (BSI)

2 ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:2
20 ತಿಳಿವುಗಳ ಹೋಲಿಕೆ  

ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು


ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.


ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ.


ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,


ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಅರಿತವರೇ, ನೀವೆಲ್ಲರು ಅದಕ್ಕಾಗಿ ಎದೆಬಡಿದುಕೊಳ್ಳಿ ! ‘ಅಯ್ಯೋ, ಶಕ್ತಿಯುತ ಚೆಂಗೋಲು, ಮಹಿಮೆಯ ದಂಡಕೋಲು ಮುರಿದುಹೋಯಿತಲ್ಲಾ!’ ಎಂದು ಪ್ರಲಾಪಿಸಿರಿ.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು