Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:27 - ಕನ್ನಡ ಸತ್ಯವೇದವು C.L. Bible (BSI)

27 ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:27
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.


ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು