Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:42 - ಕನ್ನಡ ಸತ್ಯವೇದವು C.L. Bible (BSI)

42 ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:42
14 ತಿಳಿವುಗಳ ಹೋಲಿಕೆ  

ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಸರ್ವೇಶ್ವರ ಇಂತೆನ್ನುತ್ತಾರೆ : “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು".


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು