Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:1 - ಕನ್ನಡ ಸತ್ಯವೇದವು C.L. Bible (BSI)

1 ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:1
32 ತಿಳಿವುಗಳ ಹೋಲಿಕೆ  

“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II


ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಹಜಾಯೇಲನು ಬಂದು ಜೋರ್ಡನಿನ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ, ಇರುವ ಗಿಲ್ಯಾದ್, ಬಾಷಾನ್, ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್, ಮನಸ್ಸೆ ಕುಲಗಳವನ್ನೂ ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಯೇಲರನ್ನೂ ಹಿಂಸಿಸಿದನು.


ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.


ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.


ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:


ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು