Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:16 - ಕನ್ನಡ ಸತ್ಯವೇದವು C.L. Bible (BSI)

16 ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:16
21 ತಿಳಿವುಗಳ ಹೋಲಿಕೆ  

ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ರಣಹದ್ದಿಗೆ ನಿನ್ನಪ್ಪಣೆ ಬೇಕೋ ಮೇಲೆ ಹಾರುವುದಕೆ? ನಿನ್ನ ಸಮ್ಮತಿ ಬೇಕೋ ಉನ್ನತ ಸ್ಥಳದಲ್ಲಿ ಗೂಡು ಕಟ್ಟುವುದಕೆ?


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.


‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು