Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:19 - ಕನ್ನಡ ಸತ್ಯವೇದವು C.L. Bible (BSI)

19 “ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:19
28 ತಿಳಿವುಗಳ ಹೋಲಿಕೆ  

(ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ಜೋರ್ಡನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತ ಇದ್ದಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವಪಶ್ಚಿಮ ಪ್ರದೇಶದಲ್ಲಿದ್ದವರೆಲ್ಲರನ್ನು ಓಡಿಸಿಬಿಟ್ಟವರು ಇವರೇ.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು