Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:33 - ಕನ್ನಡ ಸತ್ಯವೇದವು C.L. Bible (BSI)

33 ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:33
13 ತಿಳಿವುಗಳ ಹೋಲಿಕೆ  

ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು