Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:34 - ಕನ್ನಡ ಸತ್ಯವೇದವು C.L. Bible (BSI)

34 ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾವಿುನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:34
12 ತಿಳಿವುಗಳ ಹೋಲಿಕೆ  

ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;


ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.


ಏಲಾಮನ ಅರಸ ಕೆದೊರ್ಲಗೋಮರ್, ಗೋಯಿಮದ ಅರಸ ತಿದ್ಗಾಲ, ಬಾಬಿಲೋನಿನ ಅರಸ ಅಮ್ರಾಫೆಲ, ಎಲ್ಲಸಾರಿನ ಅರಸ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ತಗ್ಗುಪ್ರದೇಶದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು