Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:5 - ಕನ್ನಡ ಸತ್ಯವೇದವು C.L. Bible (BSI)

5 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದರಿದವರನ್ನು ಕೂಡಿಸುವದಕ್ಕೆ ಯಾರೂ ಇಲ್ಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:5
16 ತಿಳಿವುಗಳ ಹೋಲಿಕೆ  

ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


“ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.


ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು