Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:8 - ಕನ್ನಡ ಸತ್ಯವೇದವು C.L. Bible (BSI)

8 ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:8
22 ತಿಳಿವುಗಳ ಹೋಲಿಕೆ  

ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.


ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.


“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.


‘ಅಡವಿಯ ಕಾಡುಕತ್ತೆಯಂತೆ ಓಡಿಹೋಗಿ ಪ್ರಾಣ ಉಳಿಸಿಕೊಳ್ಳಿ’ ಎನ್ನುತ್ತಿರುವರು.


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು