Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:1 - ಕನ್ನಡ ಸತ್ಯವೇದವು C.L. Bible (BSI)

1 ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:1
29 ತಿಳಿವುಗಳ ಹೋಲಿಕೆ  

ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


“ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.


ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ನಿಮ್ಮ ದೂರೇನು? ನೀವೆಲ್ಲರು ನನಗೆ ದ್ರೋಹಿಗಳಾದಿರಿ, ಏಕೆ?


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:


ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು