Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:14 - ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:14
8 ತಿಳಿವುಗಳ ಹೋಲಿಕೆ  

ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು