Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:29 - ಕನ್ನಡ ಸತ್ಯವೇದವು C.L. Bible (BSI)

29 “ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:29
7 ತಿಳಿವುಗಳ ಹೋಲಿಕೆ  

ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು