Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:1 - ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನ್ ಮತ್ತು ಬಾಬಿಲೋನಿನ ಜನರ ಬಗ್ಗೆ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಯೆಹೋವನು ಯೆರೆಮೀಯನ ಮುಖಾಂತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:1
22 ತಿಳಿವುಗಳ ಹೋಲಿಕೆ  

ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು