Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:15 - ಕನ್ನಡ ಸತ್ಯವೇದವು C.L. Bible (BSI)

15 ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:15
44 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.


ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು