Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಇಂತೆನ್ನುತ್ತಾನೆ - ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ ಅವರನ್ನು ಸಂಹರಿಸಿ ಅನಂತರ ದೇಶವನ್ನು ತೀರಾ ಹಾಳುಮಾಡಿ ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:21
17 ತಿಳಿವುಗಳ ಹೋಲಿಕೆ  

ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.


ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು