Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:34 - ಕನ್ನಡ ಸತ್ಯವೇದವು C.L. Bible (BSI)

34 ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:34
32 ತಿಳಿವುಗಳ ಹೋಲಿಕೆ  

ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


“ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿ, ಅವರಿಗೆ ದಯೆ ತೋರಿಸಿ, ನಿಮಗೆ ವಿರುದ್ಧ ಪಾಪಮಾಡಿದ ನಿಮ್ಮ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸಿರಿ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.


ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು