Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:45 - ಕನ್ನಡ ಸತ್ಯವೇದವು C.L. Bible (BSI)

45 ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:45
9 ತಿಳಿವುಗಳ ಹೋಲಿಕೆ  

ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು