Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:6 - ಕನ್ನಡ ಸತ್ಯವೇದವು C.L. Bible (BSI)

6 “ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:6
36 ತಿಳಿವುಗಳ ಹೋಲಿಕೆ  

ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;


ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು