Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:13 - ಕನ್ನಡ ಸತ್ಯವೇದವು C.L. Bible (BSI)

13 “ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:13
24 ತಿಳಿವುಗಳ ಹೋಲಿಕೆ  

ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.


ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು