Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:20 - ಕನ್ನಡ ಸತ್ಯವೇದವು C.L. Bible (BSI)

20 “ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 [ಬಾಬೆಲೇ,] ನೀನು ನನಗೆ ಗದೆಯು, ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ನನ್ನ ಗದೆ. ಜನಾಂಗಗಳನ್ನು ಜಜ್ಜಿಹಾಕಲೂ ರಾಜ್ಯಗಳನ್ನು ಧ್ವಂಸ ಮಾಡಲೂ ನಾನು ನಿನ್ನನ್ನು ಬಳಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:20
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”


ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.


ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.


ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು