Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:28 - ಕನ್ನಡ ಸತ್ಯವೇದವು C.L. Bible (BSI)

28 ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದಕ್ಕೆ ವಿರುದ್ಧವಾಗಿ ಸನ್ನಾಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:28
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.


ಅವನ ಶಕ್ತಿಸಾಮರ್ಥ್ಯದ ಸಾಹಸಕಾರ್ಯಗಳೆಲ್ಲವು ಹಾಗೂ ಅರಸನು ಮೊರ್ದೆಕೈಯನ್ನು ಅತ್ಯುನ್ನತ ಗೌರವಸ್ಥಾನಕ್ಕೆ ಏರಿಸಿದ್ದನ್ನು ಕುರಿತ ಪೂರ್ಣ ವಿವರವು ಮೇದ್ಯ ಮತ್ತು ಪರ್ಷಿಯ ದೇಶಗಳ ಅರಸರ ವೃತ್ತಾಂತಗ್ರಂಥದಲ್ಲಿ ಬರೆಯಲಾಗಿವೆ.


ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.


ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು ಯೆಫೆತನ ಮಕ್ಕಳು. ಇವರ ಹೆಸರುಗಳಿರುವ ಜನಾಂಗಗಳಿಗೆ ಇವರೇ ಮೂಲಪುರುಷರು.


ಯೆಫೆತನ ಮಕ್ಕಳು ಇವರು - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಇಗೋ ರಾಷ್ಟ್ರವೊಂದು ಬರುವುದು ಉತ್ತರದಿಂದ: ಎಚ್ಚರಗೊಳ್ವರು ಮಹಾಜನ ಹಾಗೂ ಅರಸರು ಬಹುಮಂದಿ ಬರುವರವರು ಲೋಕದ ಕಟ್ಟಕಡೆಯಿಂದ.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು