Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:47 - ಕನ್ನಡ ಸತ್ಯವೇದವು C.L. Bible (BSI)

47 ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:47
13 ತಿಳಿವುಗಳ ಹೋಲಿಕೆ  

“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.


ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು