Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:62 - ಕನ್ನಡ ಸತ್ಯವೇದವು C.L. Bible (BSI)

62 ಬಳಿಕ, ‘ಸರ್ವೇಶ್ವರಾ, ನೀವು ಈ ಸ್ಥಳವನ್ನು ನಿರ್ಮೂಲಮಾಡಲು ಉದ್ದೇಶಿಸಿ, ಇದು ಜನರಿಗೂ ಜಾನುವಾರುಗಳಿಗೂ ನೆಲೆಯಾಗದೆ ಸದಾಕಾಲ ಹಾಳಾಗಿಯೇ ಉಳಿಯಲಿ ಎಂದು ನುಡಿದಿದ್ದೀರಲ್ಲಾ!’ ಎಂದು ಅರಿಕೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ ಎಂಬದಾಗಿ ಅರಿಕೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:62
16 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.


“ನೋಡು, ನೀನು ಬಾಬಿಲೋನನ್ನು ತಲುಪಿದ ಮೇಲೆ ಈ ಮಾತುಗಳನ್ನೆಲ್ಲ ತಕ್ಕವರಿಗೆ ಓದಿ ಹೇಳು.


ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು