Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:8 - ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನ್ ಬೀಳುವುದು; ಬೇಗನೆ ಮುರಿದುಹೋಗುವುದು. ಅದರ ಸಲುವಾಗಿ ಗೋಳಾಡಿರಿ. ಅದರ ನೋವಿಗಾಗಿ ಔಷಧಿಯನ್ನು ತೆಗೆದುಕೊಂಡು ಬನ್ನಿ, ಒಂದುವೇಳೆ ಅದು ಗುಣಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:8
20 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !


ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.


ಹೀಗಿರಲು, ಆ ಕೈಬೆರಳು ದೇವರ ಸನ್ನಿಧಿಯಿಂದ ಬಂದು ಬರೆದಿದೆ.”


“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:


ಏನು, ಶೇಷಕ್ ಶತ್ರುವಶವಾಯಿತೆ? ಲೋಕಪ್ರಸಿದ್ಧ ನಗರ ಶರಣಾಗತವಾಯಿತೆ?


ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು