Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:1 - ಕನ್ನಡ ಸತ್ಯವೇದವು C.L. Bible (BSI)

1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:1
12 ತಿಳಿವುಗಳ ಹೋಲಿಕೆ  

ಚಿದ್ಕೀಯನು ಇಪ್ಪತ್ತೊಂದು ವರ್ಷ ತುಂಬಿದ ಮೇಲೆ ಅರಸನಾಗಿ ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.


ಯೆಹೋಶುವನು ಜನರೆಲ್ಲರ ಸಮೇತ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.


ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.


ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.


ಲಿಬ್ನಾ, ಎತೆರ್, ಅಷಾನ್, ಇಫ್ತಾಹ,


ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.


ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು