Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:9 - ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬರಲು ಆ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:9
15 ತಿಳಿವುಗಳ ಹೋಲಿಕೆ  

ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು