Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:11 - ಕನ್ನಡ ಸತ್ಯವೇದವು C.L. Bible (BSI)

11 ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:11
16 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು