Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:24 - ಕನ್ನಡ ಸತ್ಯವೇದವು C.L. Bible (BSI)

24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:24
37 ತಿಳಿವುಗಳ ಹೋಲಿಕೆ  

ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.


ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.


“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು