Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:10 - ಕನ್ನಡ ಸತ್ಯವೇದವು C.L. Bible (BSI)

10 ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:10
30 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.


ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.


“ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ.


ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


“ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು